Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:5 - ಕನ್ನಡ ಸಮಕಾಲಿಕ ಅನುವಾದ

5 “ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ಇದು ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ನಡುವೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇದು ಯೆರೂಸಲೇಮು; ಆ ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ನನ್ನ ಒಡೆಯನಾದ ಯೆಹೋವನು ಹೀಗೆಂದನು: “ಆ ಇಟ್ಟಿಗೆಯು ಜೆರುಸಲೇಮಿನ ಚಿತ್ರ. ನಾನು ಜೆರುಸಲೇಮನ್ನು ಇತರ ಜನಾಂಗಗಳ ಮಧ್ಯದಲ್ಲಿ ನೆಲೆಗೊಳಿಸಿದ್ದೇನೆ. ಆಕೆಯ ಸುತ್ತಲೂ ಬೇರೆ ದೇಶಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:5
12 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.


ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ.


ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.


“ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.


ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!


ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು.


ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು