Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:4 - ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಧೂಪವೇದಿಗಳು ಚೂರುಚೂರಾಗುವುವು. ನಿಮ್ಮ ಜನರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು. ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ಯಜ್ಞವೇದಿಕೆಗಳು ನಾಶವಾಗುವವು. ನಿಮ್ಮ ಧೂಪವೇದಿಕೆಗಳು ಕೆಡವಲ್ಪಡುವವು. ನಿಮ್ಮ ಹೆಣಗಳನ್ನು ನಿಮ್ಮ ಹೊಲಸು ವಿಗ್ರಹಗಳ ಮುಂದೆ ಬಿಸಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:4
13 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”


ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು