Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:15 - ಕನ್ನಡ ಸಮಕಾಲಿಕ ಅನುವಾದ

15 ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿಕ್ಷಾಮಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:15
9 ತಿಳಿವುಗಳ ಹೋಲಿಕೆ  

ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು. ಹತ್ತಿರದಲ್ಲಿರುವವನು ಖಡ್ಗದಿಂದ ಬೀಳುವನು. ಉಳಿದ ಮುತ್ತಿಗೆಯಲ್ಲಿರುವವನು ಕ್ಷಾಮದಿಂದ ಸಾಯುವನು. ಹೀಗೆ ನಾನು ಅವರ ಮೇಲೆ ನನ್ನ ರೋಷವನ್ನು ತೀರಿಸಿಕೊಳ್ಳುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು