Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:26 - ಕನ್ನಡ ಸಮಕಾಲಿಕ ಅನುವಾದ

26 ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:26
26 ತಿಳಿವುಗಳ ಹೋಲಿಕೆ  

ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.


ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.


ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.


ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.


“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.


“ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.


“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.


ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.


ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.


“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?


‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


“ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು