Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:17
25 ತಿಳಿವುಗಳ ಹೋಲಿಕೆ  

ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


“ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.


ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು, ಭಯಂಕರ ಆಳ್ವಿಕೆಯನ್ನು ಹತ್ತಿರ ಮಾಡಿಕೊಳ್ಳುತ್ತೀರಿ.


ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ;


ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.


ಏಕೆಂದರೆ, ನಾನು ಮಾತನಾಡುವವನಾದ್ದರಿಂದ ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.


ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.


ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು