Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:4 - ಕನ್ನಡ ಸಮಕಾಲಿಕ ಅನುವಾದ

4 “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:4
29 ತಿಳಿವುಗಳ ಹೋಲಿಕೆ  

ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.


ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.


ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ.


ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ.


ಅವರು ರಕ್ತದಲ್ಲಿ ಸ್ವಲ್ಪ ತೆಗೆದು, ಕುರಿಮರಿಯ ಮಾಂಸವನ್ನು ಭೋಜನಮಾಡುವ ಮನೆಗಳ ಬಾಗಿಲಿನ ನಿಲುವು ಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


“ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.


“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.


ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,


ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.


ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.


ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.


“ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು.


ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು