Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯು ಯೆಹೋವನ ಸೇವಕನಾಗಿದ್ದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯ ಮರಣಾನಂತರ ಯೆಹೋವನು ಯೆಹೋಶುವನೊಡನೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:1
29 ತಿಳಿವುಗಳ ಹೋಲಿಕೆ  

ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.


ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.


ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.


ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.


ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.


ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.


ಎಫ್ರಾಯೀಮ್ ಗೋತ್ರದ ನೂನನ ಮಗ ಹೋಶೇಯ,


ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


“ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.


ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ.


“ನನ್ನ ಸೇವಕನಾದ ಮೋಶೆಯು ಮರಣಹೊಂದಿದನು. ಈಗ ನೀನು ಇಸ್ರಾಯೇಲರಾದ ಈ ಜನರೆಲ್ಲರ ಸಹಿತವಾಗಿ ಎದ್ದು, ಯೊರ್ದನ್ ನದಿಯನ್ನು ದಾಟಿ, ಇಸ್ರಾಯೇಲರಿಗೆ ನಾನು ಕೊಡುವ ದೇಶಕ್ಕೆ ಹೋಗು.


ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.


ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು