Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:14 - ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ಇರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:14
9 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.


ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.


ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.


ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ.


“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕಮಾಡಿಕೊಳ್ಳಿರಿ. ‘ನಿಮ್ಮ ದೇವರಾದ ಯೆಹೋವ ದೇವರು ಈ ದೇಶವನ್ನು ನಿಮಗೆ ಕೊಟ್ಟು ನಿಮ್ಮನ್ನು ವಿಶ್ರಾಂತಿಪಡಿಸಿದ್ದಾರೆ.’


ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.


ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.”


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು