Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:6
24 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.


ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ನಾಳೆ ಬೆಳಿಗ್ಗೆ ನೀವು ಅವರ ವಿರೋಧವಾಗಿ ಹೋಗಿರಿ. ಅವರು ಚೀಚ್ ಎಂಬ ಕಣಿವೆಯಿಂದ ಬರುತ್ತಾರೆ. ಯೆರೂಯೇಲ್ ಮರುಭೂಮಿಯ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.


ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಈ ಎಲ್ಲಾ ಅರಸರು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟುಗೂಡಿ ಮೇರೋಮ ಎಂಬ ಜಲಾಶಯದ ಬಳಿಯಲ್ಲಿ ಇಳಿದುಕೊಂಡರು.


ಆಗ ಯೆಹೋಶುವನೂ ಅವನ ಸಂಗಡ ಇದ್ದ ಸೈನಿಕರೆಲ್ಲರೂ ಬಂದು ಫಕ್ಕನೆ ಮೇರೋಮ ಜಲಾಶಯದ ಬಳಿಯಲ್ಲಿ ಅವರ ಮೇಲೆ ದಾಳಿಮಾಡಿದರು.


ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


“ ‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು