Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:9
6 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.


ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು