Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:13 - ಕನ್ನಡ ಸಮಕಾಲಿಕ ಅನುವಾದ

13 ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ನಾಡಿನೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಯೇಲರ ಮಧ್ಯದಲ್ಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರು ಗೆಷೂರ್ಯರನ್ನೂ ಮಾಕತೀಯರನ್ನೂ ದೇಶದೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿಯೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:13
13 ತಿಳಿವುಗಳ ಹೋಲಿಕೆ  

ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.


“ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.


ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;


ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.


ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.


ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.


ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು