Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೇವಿ ಕುಲದವರಿಗೆ ಮಾತ್ರ ಪಾಲು ಸಿಕ್ಕಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:14
12 ತಿಳಿವುಗಳ ಹೋಲಿಕೆ  

ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು.


ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ.


ಮೋಶೆಯು ರೂಬೇನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:


ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು.


ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು.


“ ‘ಅದು ಅವರಿಗೆ ಬಾಧ್ಯತೆಯಾಗಿರುವುದು; ನಾನೇ ಅವರಿಗೆ ಬಾಧ್ಯನಾಗಿರುವೆನು. ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯವನ್ನು ಕೊಡಬಾರದು. ಏಕೆಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು