Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:26 - ಕನ್ನಡ ಸಮಕಾಲಿಕ ಅನುವಾದ

26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯವರೆಗೂ ಇರುವ ದೇಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೆಷ್ಬೋನಿನಿಂದ ರಾಮತ್‍ಮಿಚ್ಪೆ, ಬೆಟೋನೀಮ್ ಎಂಬ ಊರುಗಳವರೆಗೂ ಇರುವ ಪ್ರದೇಶ, ಮಹನಯಿವಿುನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:26
14 ತಿಳಿವುಗಳ ಹೋಲಿಕೆ  

ದಾವೀದನು ಮಹನಯಿಮಿಗೆ ಬಂದಾಗ, ಅಮ್ಮೋನಿಯರ ರಬ್ಬಾ ಪಟ್ಟಣದ ನಾಹಾಷನ ಮಗ ಶೋಬಿಯೂ, ಲೋದೆಬಾರು ಊರಿನವನಾಗಿರುವ ಅಮ್ಮಿಯೇಲನ ಮಗ ಮಾಕೀರನೂ, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈಯೂ


ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.


ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.


ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.


ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,


ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.


ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.


ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.


ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.


ಇದ್ದೋ ಎಂಬವನ ಮಗನಾದ ಅಹೀನಾದಾಬ್ ಮಹನಯಿಮ್ ಎಂಬ ಸ್ಥಳಕ್ಕೆ ಅಧಿಕಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು