Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:3 - ಕನ್ನಡ ಸಮಕಾಲಿಕ ಅನುವಾದ

3 ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:3
18 ತಿಳಿವುಗಳ ಹೋಲಿಕೆ  

ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?


ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.


ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.


ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ.


ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ.


ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.


ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡುವೆವು,” ಎಂದರು.


ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.


ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು