Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:31 - ಕನ್ನಡ ಸಮಕಾಲಿಕ ಅನುವಾದ

31 ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಗಿಲ್ಯಾದಿನ ಅರ್ಧಭಾಗ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ನಗರಗಳು ಮನಸ್ಸೆಯ ಮಗ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:31
14 ತಿಳಿವುಗಳ ಹೋಲಿಕೆ  

ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು.


ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ.


ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ಹೀಗೆಯೇ ಮೋಶೆಯು ಯೊರ್ದನ್ ನದಿಗೆ ಆಚೆ ಯೆರಿಕೋವಿನ ಪೂರ್ವದಿಕ್ಕಿನಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಬಾಧ್ಯತೆಯಾಗಿ ಹಂಚಿದ ದೇಶಗಳು ಇವೆ.


ಏಕೆಂದರೆ ಮನಸ್ಸೆಯ ಪುತ್ರಿಯರು ಸಹ ಅವನ ಪುತ್ರರಲ್ಲಿ ಸೊತ್ತನ್ನು ಹೊಂದಿದ್ದರು. ಆದರೆ ಉಳಿದ ಮನಸ್ಸೆಯ ಪುತ್ರರಿಗೆ ಗಿಲ್ಯಾದ್ ನಾಡು ದೊರೆಯಿತು.


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.


ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋಮನ ಪುತ್ರರಿಗೆ ಬಾಷಾನಿನಲ್ಲಿರುವ ಗೋಲಾನೂ, ಅದರ ಉಪನಗರಗಳನ್ನೂ; ಅಷ್ಟಾರೋತ್ ಅದರ ಉಪನಗರಗಳನ್ನೂ;


ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.


ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.


ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು, ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.


ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ಮನಸ್ಸೆಗೆ ಒಂದು ಭಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು