Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:12
21 ತಿಳಿವುಗಳ ಹೋಲಿಕೆ  

ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.


ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.


ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.


ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.


ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು