Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲ್‍ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಹೊಂದಿಕೊಂಡದರಿಂದ ಹೆಬ್ರೋನ್ ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:14
9 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,


ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,


ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು.


ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.


ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ಅವನು ಎತ್ನಿಯ ಮಗನು, ಅವನು ಜೆರಹನ ಮಗನು, ಅವನು ಅದಾಯನ ಮಗನು,


ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು