Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:15 - ಕನ್ನಡ ಸಮಕಾಲಿಕ ಅನುವಾದ

15 ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:15
16 ತಿಳಿವುಗಳ ಹೋಲಿಕೆ  

ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.


ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.


ಮಿದ್ಯಾನ್ಯರು ತಮ್ಮ ತಲೆಯನ್ನು ತಿರುಗಿ ಎತ್ತಕೂಡದ ಹಾಗೆ ಇಸ್ರಾಯೇಲರ ಮುಂದೆ ತಗ್ಗಿಹೋದರು. ದೇಶವು ಗಿದ್ಯೋನನ ದಿವಸಗಳಲ್ಲಿ ನಲವತ್ತು ವರುಷ ವಿಶ್ರಾಂತಿಯಲ್ಲಿತ್ತು.


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.


ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.


ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,


ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ.


ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.


ಗ್ರಾಮಗಳಲ್ಲಿಯೂ, ಅವುಗಳ ಹೊಲಗಳಲ್ಲಿಯೂ ಇದ್ದವರು ಯಾರೆಂದರೆ: ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತ್ ಅರ್ಬ, ಅದರ ಗ್ರಾಮಗಳಲ್ಲಿಯೂ, ದೀಬೋನ್, ಅದರ ಗ್ರಾಮಗಳಲ್ಲಿಯೂ, ಯೆಕಬ್ಜೆಯೇಲ್, ಅದರ ಗ್ರಾಮಗಳಲ್ಲಿಯೂ,


ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು.


ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.


ಎಲಿಯಾಜರನು ಫೀನೆಹಾಸನನ್ನು ಪಡೆದನು, ಫೀನೆಹಾಸನು ಅಬೀಷೂವನನ್ನು ಪಡೆದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು