Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ - ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಗೊತ್ತಿರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:6
30 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.


ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,


ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ.


ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.


ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.


ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ದೇವರ ಮನುಷ್ಯನಾದ ಎಲೀಷನು ಹಜಾಯೇಲನು ಮುಜುಗರಕ್ಕೆ ಒಳಗಾಗುವವರೆಗೂ ಅವನನ್ನು ದಿಟ್ಟಿಸಿ ನೋಡುತ್ತಿದ್ದನು. ನಂತರ ದೇವರ ಮನುಷ್ಯನು ಅಳತೊಡಗಿದನು.


ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು.


ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.


ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.


ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.


ದೇವರ ಮನುಷ್ಯನ ಹಿಂದೆ ಹೋಗಿ, ಅವನು ಏಲಾ ಮರದ ಕೆಳಗೆ ಕುಳಿತುಕೊಂಡಿರುವುದನ್ನು ಕಂಡನು. ಆಗ ಅವನು, “ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ?” ಎಂದನು. ಅದಕ್ಕವನು, “ನಾನೇ,” ಎಂದನು.


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ಅನಂತರ ಯೆಹೋಶುವನು ಇಸ್ರಾಯೇಲರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿ ಬಂದನು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.


ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.


ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,


ದೇವರ ಮನುಷ್ಯನಾದ ಮೋಶೆಯಾದರೋ, ಅವನ ಪುತ್ರರು ಲೇವಿಯ ಗೋತ್ರದಲ್ಲಿ ಲೆಕ್ಕಿತರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು