Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:13 - ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:13
18 ತಿಳಿವುಗಳ ಹೋಲಿಕೆ  

ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,


ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.


ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.


ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.


ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.


ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ, ಯೆಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.


ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.


ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.


ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.


ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು