Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:19 - ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನೀನು ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವಳು, “ನನಗೊಂದು ಕೊಡುಗೆ ಬೇಕು. ನನ್ನನ್ನು ಬೆಂಗಾಡಿಗೆ ಕೊಟ್ಟುಬಿಟ್ಟಿದ್ದೀರಲ್ಲವೆ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡಿ,” ಎಂದಳು. ಆಗ ಕಾಲೇಬನು ಅವಳಿಗೆ ಬುಗ್ಗೆಗಳಿದ್ದ ಮೇಲಣ ಹಾಗೂ ಕೆಳಗಣ ಸ್ಥಳಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗೊಂದು ದಾನ ಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ; ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:19
8 ತಿಳಿವುಗಳ ಹೋಲಿಕೆ  

ಆದ್ದರಿಂದ ಸಹೋದರರನ್ನು ಮುಂಚಿತವಾಗಿ ಹೋಗುವುದಕ್ಕೆ ನಾನು ಏರ್ಪಾಡು ಮಾಡಬೇಕಾಯಿತು. ಅವರು ಬಂದು ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಕಾರ್ಯವನ್ನು ಮುಗಿಸುವರು. ಹೀಗೆ ಈ ಉದಾರವಾಗಿರುವ ದಾನವು ಬಲಾತ್ಕಾರದ ವಸೂಲಿಯಾಗಿರದೆ ಮನಃಪೂರ್ವಕವಾಗಿ ಕೊಟ್ಟಿರುವ ಸಹಾಯ ಧನವಾಗಿರುವುದು.


ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.


ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”


ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.


ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.


ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.


ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು