Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:11 - ಕನ್ನಡ ಸಮಕಾಲಿಕ ಅನುವಾದ

11 ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತಗಳಲ್ಲಿ ಬೇತ್‍ಷೆಯಾನ್, ಇಬ್ಲೆಯಾಮ್, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:11
22 ತಿಳಿವುಗಳ ಹೋಲಿಕೆ  

ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.


ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.


“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.


ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.


ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. ಗಿಲ್ಗಾಲದಲ್ಲಿಯ ಗೊಯ್ಮದ ಅರಸನು.


ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.


ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.


ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು.


ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.


ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ


ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.


ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.


ಇದಲ್ಲದೆ ಕೊಹಾತನ ಪುತ್ರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರನ್ನೂ, ಅದರ ಉಪನಗರಗಳನ್ನೂ; ಬಿಳ್ಳಾಮ್ ಉಪನಗರಗಳನ್ನೂ ಕೊಟ್ಟರು.


ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು.


ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು.


ತಾನಕದ ಅರಸನು. ಮೆಗಿದ್ದೋವಿನ ಅರಸನು.


ನದಿಯ ದಕ್ಷಿಣ ಸೀಮೆ ಎಫ್ರಾಯೀಮನದು; ಉತ್ತರ ಸೀಮೆ ಮನಸ್ಸೆಯದು, ಮೆಡಿಟೆರೆನಿಯನ್ ಸಮುದ್ರವು ಅದರ ಮೇರೆಯಾಗಿರುವುದು. ಉತ್ತರಕ್ಕೆ ಇರುವ ಆಶೇರ್ ಗೋತ್ರದವರ ಪ್ರಾಂತವೂ ಪೂರ್ವಕ್ಕೆ ಇರುವ ಇಸ್ಸಾಕಾರ್ ಗೋತ್ರವೂ ಇರುವುದು.


ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.


ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು.


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು