Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೆಹೋಶುವನು ಶೀಲೋವಿನಲ್ಲಿಯೇ ಸರ್ವೇಶ್ವರನ ಮುಂದೆ ಅವರಿಗೋಸ್ಕರ ಚೀಟು ಹಾಕಿ ನಾಡನ್ನು ಅವರವರ ಪಂಗಡಗಳಿಗೆ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟುಹಾಕಿ ದೇಶವನ್ನು ಅವರ ಶಾಖೆಗಳಿಗೆ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:10
24 ತಿಳಿವುಗಳ ಹೋಲಿಕೆ  

ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.


ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.


ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು


“ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು.


ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.


ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.


ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.


ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.


ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು.


ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು.


“ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.


ಆದ್ದರಿಂದ ಚೀಟುಹಾಕಿ ದೇಶವನ್ನು ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ.


ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರಮಾಡಿ, ದೇಶವನ್ನು ಹಂಚಿಕೊಡಲಾಯಿತು.


ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.


ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.


ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು