Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಸಿಕ್ಕುವದಿಲ್ಲ; ಯೆಹೋವನ ಯಾಜಕ ಸೇವೆಯೇ ಅವರ ಸ್ವಾಸ್ತ್ಯವಾಗಿದೆ. ಗಾದ್ ರೂಬೇನ್ ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದ ಸ್ವಾಸ್ತ್ಯವು ಸಿಕ್ಕಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:7
11 ತಿಳಿವುಗಳ ಹೋಲಿಕೆ  

ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು.


ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ.


ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು.


ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು