Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:10 - ಕನ್ನಡ ಸಮಕಾಲಿಕ ಅನುವಾದ

10 ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿಬಿಟ್ಟದ್ದನ್ನೂ ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಿರ್ಮೂಲ ಮಾಡಿದ್ದನ್ನೂ ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:10
13 ತಿಳಿವುಗಳ ಹೋಲಿಕೆ  

ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.


“ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.


ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ.


ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು