Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:3
15 ತಿಳಿವುಗಳ ಹೋಲಿಕೆ  

ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.


ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು.


ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.


ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.


ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ, ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.


“ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.


ನಾವು ಅವನಿಗೆ, “ನಾವು ಗೂಢಚಾರರಲ್ಲ, ಸತ್ಯವಂತರೇ.


ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.


ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು.


ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.


ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.


ತಿರುಗಿ ಅವನು ಅವಳಿಗೆ, “ನೀನು ಬಾಗಿಲಲ್ಲಿ ನಿಂತಿರು. ಯಾವನಾದರೂ ಬಂದು, ‘ಇಲ್ಲಿ ಯಾರಾದರೂ ಇದ್ದಾರೋ?’ ಎಂದು ನಿನ್ನನ್ನು ಕೇಳಿದರೆ, ‘ಇಲ್ಲ’ ಎಂದು ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು