Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:3 - ಕನ್ನಡ ಸಮಕಾಲಿಕ ಅನುವಾದ

3 ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮಲ್ಲಿ ಯಾರಾದರು ಅರಿಯದೆ ಅಕಸ್ಮಾತ್ತಾಗಿ ನರಹತ್ಯೆ ಮಾಡಿದ್ದೇ ಆದರೆ ಅಂಥವನು ಅಲ್ಲಿಗೆ ಓಡಿಹೋಗಲಿ. ಹತನಾದವನ ಹತ್ತಿರದ ಬಂಧು ಮುಯ್ಯಿತೀರಿಸದಂತೆ ಆ ನಗರಗಳು ನಿಮಗೆ ಆಶ್ರಯ ಸ್ಥಾನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮಲ್ಲಿ ತಿಳಿಯದೆ ಅಕಸ್ಮಾತ್ತಾಗಿ ನರಹತ್ಯ ಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮಲ್ಲಿ ಒಬ್ಬನು ತಿಳಿಯದೆ ಆಕಸ್ಮಿಕವಾಗಿ ನರಹತ್ಯ ಮಾಡಿದರೆ ಅವನು ಯಾವುದಾದರೊಂದು ಆಶ್ರಯನಗರಕ್ಕೆ ಹೋಗಿ ಅಡಗಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:3
8 ತಿಳಿವುಗಳ ಹೋಲಿಕೆ  

“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:


ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.


“ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.


ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.


ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.


“ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,


ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು