Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:9 - ಕನ್ನಡ ಸಮಕಾಲಿಕ ಅನುವಾದ

9 ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲ್ಯರೆಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೊಬ್ಬನನ್ನು ಆಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರೆಲ್ಲರಿಗೂ ಹಾಗೂ ಅವರ ನಡುವೆ ವಾಸಮಾಡುತ್ತಿದ್ದ ಹೊರನಾಡಿನವರಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಅಕಸ್ಮಾತ್ತಾಗಿ ಬೇರೊಬ್ಬನನ್ನು ಕೊಂದವನು ಓಡಿಹೋಗಿ ಹತನಾದವನ ಹತ್ತಿರ ಬಂಧುವಿನಿಂದ ತಲೆ ತಪ್ಪಿಸಿಕೊಳ್ಳಬಹುದಿತ್ತು. ನ್ಯಾಯ ಸಭೆಯ ಮುಂದೆ ನಿಲ್ಲುವ ತನಕ ಅಲ್ಲೇ ಇರಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಅವರ ಮಧ್ಯದಲ್ಲಿರುವ ಪರದೇಶಿಗಳಲ್ಲಿಯೂ ಬೇರೊಬ್ಬನನ್ನು ಅಕಸ್ಮಾತ್ತಾಗಿ ಕೊಂದವನು ಓಡಿಹೋಗಿ ತಾನು ನ್ಯಾಯಸಭೆಯ ಮುಂದೆ ನಿಲ್ಲುವವರೆಗೆ ಹತವಾದವನ ಸಮೀಪಬಂಧುವಿಗೆ ತಪ್ಪಿಸಿಕೊಳ್ಳುವದಕ್ಕೋಸ್ಕರ ನೇಮಕವಾದ ಪಟ್ಟಣಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:9
5 ತಿಳಿವುಗಳ ಹೋಲಿಕೆ  

ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.


ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು.


ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.


ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.


ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು