Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:1 - ಕನ್ನಡ ಸಮಕಾಲಿಕ ಅನುವಾದ

1 ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೇವಿಕುಲಾಧಿಪತಿಗಳು ಕಾನಾನ್‍ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಇಸ್ರಾಯೇಲ್ ಕುಲಾಧಿಪತಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:1
9 ತಿಳಿವುಗಳ ಹೋಲಿಕೆ  

ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.


ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.


ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು.


ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು.


ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.


ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,


ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು