Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:19 - ಕನ್ನಡ ಸಮಕಾಲಿಕ ಅನುವಾದ

19 ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ನಾಡು ಅಶುದ್ಧವಾಗಿದೆಯೆಂದು ತೋರಿದರೆ ಸರ್ವೇಶ್ವರನ ಗುಡಾರವಿರುವ ಅವರ ಸ್ವಂತ ನಾಡಿಗೆ ಬಂದು ನಮ್ಮ ಮಧ್ಯೆಯಿರುವ ಸೊತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠ ಒಂದನ್ನು ಬಿಟ್ಟು ನಿಮಗಾಗಿ ಇನ್ನೊಂದನ್ನು ಕಟ್ಟಿಕೊಂಡು ಸರ್ವೇಶ್ವರನಿಗೂ ನಮಗೂ ವಿರುದ್ಧ ತಿರುಗಿಬೀಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ದೇಶವು ಅಶುದ್ಧವಾಗಿದೆಯೆಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ನಮ್ಮ ದೇವರಾದ ಯೆಹೋವನ ವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:19
12 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.


ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ, ನಿಮ್ಮ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ ಯೆಹೋವ ದೇವರೇ, ನೀವು ವಾಸಿಸುವುದಕ್ಕೆ ಮಾಡಿಕೊಂಡಿರುವ ನಿಮ್ಮ ಸ್ವತ್ತಾಗಿರುವ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿರಿ.


ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.


ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು