Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:25 - ಕನ್ನಡ ಸಮಕಾಲಿಕ ಅನುವಾದ

25 ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ರೂಬೇನ್ಯರೇ, ಗಾದ್ಯರೇ, ಸರ್ವೇಶ್ವರ ನಿಮಗೂ ನಮಗೂ ನಡುವೆ ಈ ಜೋರ್ಡನ್ ನದಿಯನ್ನು ಸರಹದ್ದಾಗಿ ಇಟ್ಟಿದ್ದಾರೆ. ಸರ್ವೇಶ್ವರನಲ್ಲಿ ನಿಮಗೆ ಯಾವ ಪಾಲೂ ಇಲ್ಲ, ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೇವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ರೂಬೇನ್ಯರೇ, ಗಾದ್ಯರೇ, ಯೆಹೋವನು ನಮಗೂ ನಿಮಗೂ ನಡುವೆ ಯೊರ್ದನ್ ಹೊಳೆಯನ್ನು ಮೇರೆಯಾಗಿಟ್ಟಿದ್ದಾನೆ. ಆತನಲ್ಲಿ ನಿಮಗೇನೂ ಪಾಲಿಲ್ಲ ಎಂದು ಹೇಳಿ ಅವರನ್ನು ದೇವಭಕ್ತಿಯಿಂದ ತೊಲಗಿಸಿ ಬಿಟ್ಟಾರು ಎಂಬ ಭಯದಿಂದ ನಾವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:25
13 ತಿಳಿವುಗಳ ಹೋಲಿಕೆ  

ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.


ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.


“ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ?


“ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’


ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು