ಯೆಹೋಶುವ 22:26 - ಕನ್ನಡ ಸಮಕಾಲಿಕ ಅನುವಾದ26 “ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಈ ಕಾರಣದಿಂದಲೇ, ‘ಬನ್ನಿ, ಒಂದು ಬಲಿಪೀಠವನ್ನು ಕಟ್ಟೋಣ, ಅದು ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬನ್ನಿರಿ, ಒಂದು ವೇದಿಯನ್ನು ಕಟ್ಟೋಣ ಎಂದುಕೊಂಡು ಹಾಗೆಯೇ ಮಾಡಿದೆವು. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರವಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಅದಕ್ಕಾಗಿ ಈ ಯಜ್ಞವೇದಿಕೆಯನ್ನು ಕಟ್ಟಲು ನಾವು ನಿರ್ಧರಿಸಿದೆವು. ಆದರೆ ಅದನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸಲು ಕಟ್ಟಿಲ್ಲ. ಅಧ್ಯಾಯವನ್ನು ನೋಡಿ |
ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.