Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:20 - ಕನ್ನಡ ಸಮಕಾಲಿಕ ಅನುವಾದ

20 ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:20
19 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.


“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.


“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.


ಅದಕ್ಕೆ ಜನರು ಯೆಹೋಶುವನಿಗೆ, “ಇಲ್ಲ! ನಾವು ಯೆಹೋವ ದೇವರನ್ನೇ ಸೇವಿಸುವೆವು,” ಎಂದರು.


ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.


ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.


“ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.


ಅವರು ನನ್ನ ತೀರ್ಪುಗಳನ್ನು ಮುರಿದು, ನನ್ನ ಆಜ್ಞೆಗಳನ್ನು ಕೈಗೊಳ್ಳದೆ ಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು