Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:32 - ಕನ್ನಡ ಸಮಕಾಲಿಕ ಅನುವಾದ

32 ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:32
9 ತಿಳಿವುಗಳ ಹೋಲಿಕೆ  

ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.


ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.


ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು.


ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.


ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.


ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು.


ಇದಲ್ಲದೆ ನಾನು ನನ್ನ ಖಡ್ಗದಿಂದಲೂ ಬಿಲ್ಲಿನಿಂದಲೂ ಅಮೋರಿಯರ ಕೈಯಿಂದ ತೆಗೆದುಕೊಂಡ ಒಂದು ಹೊಲವನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ,” ಎಂದನು.


ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು