Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:14 - ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜನರು ಯೊರ್ದನ್ ಹೊಳೆಯನ್ನು ದಾಟುವದಕ್ಕೋಸ್ಕರ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ನಡೆದರು. ಜನರು ತಾವು ಪಾಳೆಯ ಮಾಡಿಕೊಂಡಿದ್ದ ಸ್ಥಳದಿಂದ ಹೊರಟು ಜೋರ್ಡನ್ ನದಿಯ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:14
10 ತಿಳಿವುಗಳ ಹೋಲಿಕೆ  

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ.


‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.


ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.


ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.


“ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.


“ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು