Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:3 - ಕನ್ನಡ ಸಮಕಾಲಿಕ ಅನುವಾದ

3 ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷ ಹೊತ್ತಿರುವದನ್ನು ಕಂಡಕೂಡಲೆ ನೀವೂ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:3
20 ತಿಳಿವುಗಳ ಹೋಲಿಕೆ  

ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.


ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.


ಮೋಶೆ ಯೆಹೋವ ದೇವರು ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ,


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆಗ ಒಬ್ಬ ನಿಯಮ ಬೋಧಕ ಬಂದು ಯೇಸುವಿಗೆ, “ಬೋಧಕರೇ, ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು,” ಎಂದನು.


ಆಗ ಅವರು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.


ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು.


ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.


“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು.


ಲೇವಿಯರು ಯೆಹೋವ ದೇವರ ಮಂಜೂಷವನ್ನೂ, ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳಿದ್ದ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ, ಆ ದೊಡ್ಡ ಬಂಡೆಯ ಮೇಲಿಟ್ಟುಕೊಂಡರು. ಬೇತ್ ಷೆಮೆಷ್ ಊರಿನವರು ಆ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸಮರ್ಪಣೆಗಳನ್ನೂ ಅರ್ಪಿಸಿದರು.


ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡು,


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು