Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:12 - ಕನ್ನಡ ಸಮಕಾಲಿಕ ಅನುವಾದ

12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:12
9 ತಿಳಿವುಗಳ ಹೋಲಿಕೆ  

ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,


ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.


ಗಾದನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.”


ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.


ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು