Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:13 - ಕನ್ನಡ ಸಮಕಾಲಿಕ ಅನುವಾದ

13 ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಸುಮಾರು ನಾಲ್ವತ್ತು ಸಾವಿರ ಭಟರಾಗಿದ್ದು ಯುದ್ಧಮಾಡುವದಕ್ಕಾಗಿ ಯೆಹೋವನ ಮುಂದೆ ಯೆರಿಕೋವಿನ ಬೈಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯುದ್ಧಸನ್ನದ್ಧರಾದ ಸುಮಾರು ನಲವತ್ತು ಸಾವಿರ ಭಟರು ಯೆಹೋವನ ಮುಂದೆ ಜೆರಿಕೊವಿನ ಬಯಲಿನ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:13
11 ತಿಳಿವುಗಳ ಹೋಲಿಕೆ  

ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.


ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.


ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.


ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.


ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು.


ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು