Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:3 - ಕನ್ನಡ ಸಮಕಾಲಿಕ ಅನುವಾದ

3 ಯೊರ್ದನ್ ನದಿ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಲ್ಲಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅವುಗಳನ್ನು ನಿಮ್ಮ ಸಂಗಡ ಆಚೆದಡಕ್ಕೆ ತಂದು, ನೀವು ಈ ರಾತ್ರಿಯಲ್ಲಿ ಇಳಿದುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಿಗೆ, ‘ನೀವು ಜೋರ್ಡನಿನ ಮಧ್ಯದಲ್ಲಿ ಯಾಜಕರು ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ, ಅವುಗಳನ್ನು ನಿಮ್ಮ ಸಂಗಡ ಈಚೆ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿ’ ಎಂದು ಆಜ್ಞಾಪಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿರುವ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ನಿಲ್ಲಿಸಿರಿ ಎಂದು ಆಜ್ಞಾಪಿಸಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:3
11 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು. ಯೆಹೋವ ದೇವರು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನ್ ನದಿಯ ಮಧ್ಯದಿಂದ ತೆಗೆದುಕೊಂಡು, ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ಇಟ್ಟರು.


ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.


ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.


ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ಆಗ ಯೆಹೋಶುವನು ಇಸ್ರಾಯೇಲರಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಆರಿಸಿಕೊಂಡ ಹನ್ನೆರಡು ಮಂದಿ ಗಂಡಸರನ್ನು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು