Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:13 - ಕನ್ನಡ ಸಮಕಾಲಿಕ ಅನುವಾದ

13 ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:13
24 ತಿಳಿವುಗಳ ಹೋಲಿಕೆ  

ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.


ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.


ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.


ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.


ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು. ಆಗ, ನಾರುಮಡಿಯನ್ನು ಧರಿಸಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆತನ ನಡುವು ಊಫಜಿನ ಅತ್ಯುತ್ತಮ ಬಂಗಾರದಿಂದ ಬಿಗಿದಿತ್ತು.


ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.


ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,


ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.


ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.


ಆಗ ಮಾನೋಹನು ಎದ್ದು ತನ್ನ ಹೆಂಡತಿಯೊಡನೆ ಹೋಗಿ, ಅವನ ಬಳಿಗೆ ಬಂದು, ಅವನಿಗೆ, “ಈ ಸ್ತ್ರೀಯ ಸಂಗಡ ಮಾತನಾಡಿದವನು ನೀನೋ?” ಎಂದನು. ಅವನು, “ನಾನೇ,” ಎಂದನು.


ಆಗ ನಾನು ಕಣ್ಣೆತ್ತಿ ನೋಡಿದಾಗ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ, ಇನ್ನೊಂದಕ್ಕಿಂತ ಒಂದು ಉದ್ದವಾಗಿದ್ದವು. ಆ ದೊಡ್ಡ ಕೊಂಬು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.


ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.


ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.


ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು.


ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.


ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು.


ಅದೇ ಕಾಲದಲ್ಲಿ ದಿನೇ ದಿನೇ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವವರೆಗೆ, ದಾವೀದನಿಗೆ ಸಹಾಯ ಕೊಡುವುದಕ್ಕೆ ಅವನ ಕಡೆಗೆ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು