Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:6 - ಕನ್ನಡ ಸಮಕಾಲಿಕ ಅನುವಾದ

6 ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:6
20 ತಿಳಿವುಗಳ ಹೋಲಿಕೆ  

ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.


ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.


ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.


ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.


ಈಜಿಪ್ಟಿನಿಂದ ಹೊರಟ ಗಂಡಸರೆಲ್ಲರಿಗೂ ಸುನ್ನತಿ ಆಗಿತ್ತು. ಆದರೆ ಈಜಿಪ್ಟಿನಿಂದ ಹೊರಟಾಗ ಮರುಭೂಮಿಯೊಳಗೆ ಮಾರ್ಗದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿ ಆಗಿರಲಿಲ್ಲ.


ಅವರಿಗೆ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿಸಿದನು. ಅವರಿಗೆ ಮಾರ್ಗದಲ್ಲಿ ಸುನ್ನತಿ ಮಾಡದೆ ಇದ್ದುದರಿಂದ ಅವರು ಸುನ್ನತಿ ಇಲ್ಲದವರಾಗಿದ್ದರು.


ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು.


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು