Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:13 - ಕನ್ನಡ ಸಮಕಾಲಿಕ ಅನುವಾದ

13 ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು; ಹಿಂದಣ ದಳವು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ನಡೆದರು. ಆಯಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ಪಟ್ಟಣದ ಸುತ್ತಲೂ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:13
8 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದ್ದರಿಂದ, ಅವರು ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.


ದಾನನ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಇದ್ದನು.


ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.


ಹೀಗೆ ಯುದ್ಧ ಸನ್ನದ್ಧರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.


ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು.


ಹೀಗೆ ಎರಡನೆಯ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿಬಂದು ಪಾಳೆಯಕ್ಕೆ ಹಿಂದಿರುಗಿದರು. ಹೀಗೆಯೇ ಆರು ದಿನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು