Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:19 - ಕನ್ನಡ ಸಮಕಾಲಿಕ ಅನುವಾದ

19 ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಲ್ಲ ಬೆಳ್ಳಿ ಬಂಗಾರ ಹಾಗೂ ತಾಮ್ರ ಕಬ್ಬಿಣ ಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಮೀಸಲಾಗಿದ್ದು ಅವರ ಭಂಡಾರಕ್ಕೆ ಸೇರತಕ್ಕವುಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:19
25 ತಿಳಿವುಗಳ ಹೋಲಿಕೆ  

ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.


ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.


ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.


ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.


ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು.


ಹೀಗೆಯೇ ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.


ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು.


ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು.


ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು.


ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು.


ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.


ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರೆದುಕೊಂಡು, ಖಜಾನೆ ಕೆಳಗಿರುವ ಅರಮನೆಗೆ ಹೋಗಿ, ಅಲ್ಲಿಂದ ಹರಿದುಹೋದ ಹಳೆಯ ಬಟ್ಟೆಗಳನ್ನೂ, ಸವೆದು ಹೋದ ಹಳೆಯ ವಸ್ತ್ರಗಳನ್ನೂ ತೆಗೆದುಕೊಂಡು, ಅವುಗಳನ್ನು ಹಗ್ಗಗಳಂತೆ ಯೆರೆಮೀಯನ ಬಳಿಗೆ ಬಾವಿಯೊಳಗೆ ಇಳಿಸಿದನು.


ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು


ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು.


ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.


ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.


ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.


ಅವರು ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವುದಕ್ಕೆ ಯುದ್ಧಗಳಿಂದಲೂ, ಕೊಳ್ಳೆಯಿಂದಲೂ ಸಂಪಾದಿಸಿದವುಗಳನ್ನು ಪ್ರತಿಷ್ಠೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು