Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೋಡು, ನಾನು ಜೆರಿಕೋವನ್ನು, ಅದರ ಅರಸನನ್ನು ಹಾಗು ಅದರ ಯುದ್ಧವೀರರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:2
20 ತಿಳಿವುಗಳ ಹೋಲಿಕೆ  

ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.


ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.


“ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು.


ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣವನ್ನು ಒಂದು ಸಾರಿ ಸುತ್ತಬೇಕು. ಈ ಪ್ರಕಾರ ಆರು ದಿವಸ ಮಾಡಬೇಕು.


ಯೆರಿಕೋವಿನ ಅರಸನು ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು.


ಯೆಹೋವ ದೇವರು ಯೆಹೋಶುವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು