Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:24
13 ತಿಳಿವುಗಳ ಹೋಲಿಕೆ  

ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.


ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”


ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.


ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು.


ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.


ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.


ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ಅವರು ಒಬ್ಬರನ್ನಾದರೂ ಉಳಿಸದೆ, ಅದರಲ್ಲಿದ್ದ ಪ್ರತಿಯೊಬ್ಬರನ್ನೂ ಖಡ್ಗದಿಂದ ಸಂಹರಿಸಿದನು. ಹಾಚೋರನ್ನು ಬೆಂಕಿಯಿಂದ ಸುಟ್ಟುಬಿಟ್ಟನು.


ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು.


ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು