Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ವೇಶ್ಯೆಯಾದ ರಾಹಾಬಳು, ಜೆರಿಕೋ ನಗರದಲ್ಲಿ ಸಂಚರಿಸಿ ನೋಡಲು ಬಂದಿದ್ದ ಯೆಹೋಶುವನ ಗೂಢಚಾರರನ್ನು ಬಚ್ಚಿಟ್ಟಿದ್ದರಿಂದ ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದುದೆಲ್ಲವನ್ನೂ ಉಳಿಸಿದರು. ಅವಳು ಇಂದಿನವರೆಗೂ ಇಸ್ರಯೇಲರಲ್ಲೇ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೂಳೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿನೋಡುವದಕ್ಕೆ ಬಂದಿದ್ದ ಯೆಹೋಶುವನ ದೂತರನ್ನು ಅಡಗಿಸಿಟ್ಟದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:25
11 ತಿಳಿವುಗಳ ಹೋಲಿಕೆ  

ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.


ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?


ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, ಓಬೇದನು ಇಷಯನ ತಂದೆ,


ಆದರೆ ಆಕೆಯು ಅವರನ್ನು ಮಾಳಿಗೆಯ ಮೇಲೆ ಏರಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನೊಳಗೆ ಬಚ್ಚಿಟ್ಟಿದ್ದಳು.


ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’


ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.


ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.


ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು