Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಜಕರು ಕೊಂಬುಗಳನ್ನು ಊದಬೇಕು. ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಮಹತ್ತರವಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವದು; ಪ್ರತಿಯೊಬ್ಬನೂ ನೆಟ್ಟಗೆ ಒಳನುಗ್ಗಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:5
17 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ.


ತುತೂರಿಯ ಧ್ವನಿಯು ಬರಬರುತ್ತಾ ಹೆಚ್ಚಾಗುತ್ತಾ ಇತ್ತು. ಆಗ ಮೋಶೆಯು ದೇವರೊಡನೆ ಮಾತನಾಡಿದನು. ಅವನಿಗೆ ದೇವರು ಉತ್ತರಕೊಟ್ಟರು.


ಇಸ್ರಾಯೇಲರೂ, ಯೆಹೂದದ ಜನರೂ ಎದ್ದು ಆರ್ಭಟಿಸಿ, ತಗ್ಗಿನ ಮೇರೆಯವರೆಗೂ, ಎಕ್ರೋನಿನ ಬಾಗಿಲಿನವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದ್ದರಿಂದ ಹತರಾದ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ಎಕ್ರೋನಿನವರೆಗೂ ಬಿದ್ದಿದ್ದರು.


ದಾವೀದನು ಉದಯಕಾಲದಲ್ಲಿ ಎದ್ದು, ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು, ತನ್ನ ತಂದೆ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತೆಗೆದುಕೊಂಡುಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ, ಸಲಕರಣೆಗಳು ಇರುವ ಸ್ಥಳಕ್ಕೆ ಬಂದನು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.


ದುರ್ಗದಂತೆ ಎತ್ತರವಾಗಿರುವ ನಿನ್ನ ಕೋಟೆಗಳನ್ನು ಕೆಡವಿ, ತಗ್ಗಿಸಿ, ನೆಲಸಮಮಾಡುವರು, ಅದು ಧೂಳುಪಾಲಾಗುವುದು.


ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.


ಆಗ ಹೊಂಚು ಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಸಾಲಾಗಿ ಹೊರಟು, ಪಟ್ಟಣದಲ್ಲಿರುವವರೆಲ್ಲರನ್ನು ಖಡ್ಗದಿಂದ ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು