Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:1 - ಕನ್ನಡ ಸಮಕಾಲಿಕ ಅನುವಾದ

1 ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದರಿಂದ ಇಸ್ರಾಯೇಲ್ಯರೆಲ್ಲರೂ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:1
19 ತಿಳಿವುಗಳ ಹೋಲಿಕೆ  

ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.


ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “ ‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು.


“ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?


ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.


ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.


“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು.


ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.


ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು