Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸುವರು. ಅವರು ಶಾಪಗ್ರಸ್ತರೇ. ಶಾಪಕ್ಕೆ ಕಾರಣವಾದದ್ದನ್ನು ನಿಮ್ಮ ಮಧ್ಯದಿಂದ ತೆಗೆದು ಹಾಕುವವರೆಗೆ ನಾನು ನಿಮ್ಮ ಸಂಗಡ ಬರುವದಿಲ್ಲ. ಎದ್ದು ಜನರನ್ನು ಶುದ್ಧಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:12
21 ತಿಳಿವುಗಳ ಹೋಲಿಕೆ  

ನಿಮ್ಮ ಅಕ್ರಮಗಳೇ, ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿವೆ. ನಿಮ್ಮ ಪಾಪಗಳೇ, ಆತನು ಹೇಳಿದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಸಿವೆ.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.


ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.


ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.


ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’


ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.”


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.


ಮೋಶೆಯು ಇಸ್ರಾಯೇಲರಿಗೆ ಈ ಮಾತುಗಳನ್ನು ಹೇಳಿದಾಗ, ಜನರು ಬಹಳವಾಗಿ ದುಃಖಪಟ್ಟರು.


ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.


ಆಗ ಸೌಲನು, “ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ. ಈ ಹೊತ್ತು ಈ ಪಾಪ ಯಾವುದರಿಂದ ಉಂಟಾಯಿತೆಂದು ತಿಳಿದುಕೊಂಡು ನೋಡಿರಿ.


ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.


ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?


ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.


ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು