Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:17 - ಕನ್ನಡ ಸಮಕಾಲಿಕ ಅನುವಾದ

17 ಆಯಿ ಎಂಬ ಪಟ್ಟಣದಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇರಲಿಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಆಯಿಯಲ್ಲಿ ಹಾಗೂ ಬೇತೇಲಿನಲ್ಲಿ ಗಂಡಸರು ಇರಲಿಲ್ಲ. ಊರಬಾಗಿಲುಗಳನ್ನು ತೆರೆದಿಟ್ಟು ಎಲ್ಲರೂ ಇಸ್ರಯೇಲರನ್ನು ಹಿಂದಟ್ಟಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಯಿ ಎಂಬ ಊರಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರು ಬಾಗಲುಗಳನ್ನು ತೆರೆದುಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವದಕ್ಕೋಸ್ಕರ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಯಿ” ಮತ್ತು ಬೇತೇಲಿನ ಎಲ್ಲ ಜನರು ಇಸ್ರೇಲಿನ ಸೈನ್ಯವನ್ನು ಬೆನ್ನಟ್ಟಿದರು. ಪಟ್ಟಣದ ಬಾಗಿಲನ್ನು ತೆರೆದಿಟ್ಟಿದ್ದರು; ಒಬ್ಬನಾದರೂ ಪಟ್ಟಣದ ರಕ್ಷಣೆಗೆ ಉಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:17
9 ತಿಳಿವುಗಳ ಹೋಲಿಕೆ  

ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು.


ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.


ಆಗ ಬೆನ್ಯಾಮೀನ್ಯರು ಇಸ್ರಾಯೇಲ್ ಜನಕ್ಕೆ ಎದುರಾಗಿ ಹೊರಟು, ಪಟ್ಟಣದ ಬಳಿಯಿಂದ ಹೊರಬಂದು, ಅಡವಿಯಲ್ಲಿ ಹೆದ್ದಾರಿಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು